+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಬೆಂಗಳೂರು:- ದಿನಾಂಕ: 03-10-2018 ರಂದು ಮಹಾಮಂಡಳದ ವತಿಯಿಂದ ಬೆಂಗಳೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಡೆದ ಶಿಕ್ಷಣ ತರಬೇತಿ ಕಾರ್ಯಾಗಾರ

ಬೆಂಗಳೂರು: ದಿನಾಂಕ: 03-10-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಬೆಂಗಳೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಜರುಗಿದ್ದು,
ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಪ್ರಕಾಶ್ ಸಿ. ಮಜ್ಜಿ, ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಕೇಂದ್ರ ಕಛೇರಿ ಇವರು ನೆರವೇರಿಸಿದರು, ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಾಮಂಡಳದ ಅಧ್ಯಕ್ಷರಾದ ಶ್ರೀ ಸಿ.ಎಂ.ಮಾರೇಗೌಡ ರವರು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಶ್ರೀಮತಿ ಕೆ.ಎಂ. ಆಶಾ, ಕೆ.ಸಿ.ಎಸ್, ಸಹಕಾರ ಸಂಘಗಳ ಅಪರ ನಿಬಂಧಕರು (ಪತ್ತು) ಕೇಂದ್ರ ಕಛೇರಿ, ಬೆಂಗಳೂರು, ಶ್ರೀ ಮೊಹಮ್ಮದ್ ಜಫರುಲ್ಲಾ ಖಾನ್, ಕೆ.ಸಿ.ಎಸ್, ಸಹಕಾರ ಸಂಘಗಳ ಜಂಟಿ ನಿಬಂಧಕರು (ಪಟ್ಟಣ ಬ್ಯಾಂಕುಗಳ ವಿಭಾಗ) ಕೇಂದ್ರ ಕಛೇರಿ, ಬೆಂಗಳೂರು ಹಾಗೂ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ಎಂ.ಜೆ. ನರೇಂದ್ರ ಕುಮಾರ, ಶ್ರೀ ಡಿ. ಚನ್ನಯ್ಯ, ಶ್ರೀ ಕೆ. ಕೃಷ್ಣಮೂರ್ತಿ, ಶ್ರೀ ಎನ್.ಬಿ. ರವೀಶಯ್ಯ, ಶ್ರೀ ಕೆ.ಕೆ. ಮಹೇಂದ್ರಪ್ರಸಾದ್ ಗೌಡ, ಶ್ರೀ ತಮ್ಮಣ್ಣ ಬಿ. ಕೆಂಚರಡ್ಡಿ, ಶ್ರೀ ಧರೇಪ್ಪ ಎಂ. ಅಲಗೂರ, ಶ್ರೀ ಗುರುಪಾದಪ್ಪಗೌಡ ಬ. ಪಾಟೀಲ ಮತ್ತು ಶ್ರೀ ಆಕಾಶ ಪಾಟೀಲ ರವರು ಹಾಜರಿದ್ದರು.
ಕಾರ್ಯಾಗಾರದಲ್ಲಿ ಶ್ರೀ ಎ.ಸಿ. ದಿವಾಕರ್, ಕೆ.ಸಿ.ಎಸ್, ಸಹಕಾರ ಸಂಘಗಳ ಅಪರ ನಿಬಂಧಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮಿಣಾಭಿವೃದ್ದಿ ಬ್ಯಾಂಕ್ ನಿ., ಬೆಂಗಳೂರು ಇವರು “ಸಹಕಾರ ಸಂಘಗಳ ಕಾಯ್ದೆ ಹಾಗೂ ನಿಯಮಗಳಲ್ಲಿನ ಇತ್ತೀಚಿನ ತಿದ್ದುಪಡಿಗಳು ಹಾಗೂ ಸಹಕಾರ ಸಂಘಗಳಲ್ಲಿ ಸುಸ್ತಿಸಾಲ ವಸೂಲಾತಿಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ”, ಶ್ರೀ ಅನಿಲ್ ಭಾರದ್ವಾಜ್, ಸನ್ನದು ಲೆಕ್ಕಪರಿಶೋಧಕರಿಂದ “ಪತ್ತಿನ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ವಿಷಯಗಳ ಕುರಿತು ಹಾಗೂ ಶ್ರೀ ಸತೀಶ್ ಕೃಷ್ಣ, ಸ್ಟಾಕ್ ಹೊಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡೀಯಾ ಲಿ., ಇವರಿಂದ “ಇ-ಸ್ಟಾಂಪಿಂಗ್ ಕುರಿತು ತರಬೇತಿ” ಕುರಿತು ಉಪನ್ಯಾಸಮಾಡಿದರು ಈ ಸಂದರ್ಭದಲ್ಲಿ ಮಹಾಮಂಡಳದ ಸಲಹೆಗಾರರಾದ ಶ್ರೀ ಕೆ.ಎಸ್. ಗುರುಪ್ರಸಾದ್, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಮತಿ ಪಿ. ಆಶಾಲತಾ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Back To Top