+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗದಲ್ಲಿ ನಡೆದ ಉನ್ನತ ಮಟ್ಟದ ಶಿಕ್ಷಣ ತರಬೇತಿ ಕಾರ್ಯಕ್ರಮ

ಮೈಸೂರು: ದಿನಾಂಕ: 07.08.2019 ರಂದು ಹೋಟೆಲ್ ವಿಂಡ್ ಪ್ಲವರ್ ರೆಸಾರ್ಟ್, ಗಾಲ್ಫ್ ಕ್ಲಬ್ ಪಕ್ಕ, ರೇಸ್ ಕೋರ್ಸ್ ಹತ್ತಿರ, ಮೈಸೂರು ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಿ ನಿ., ಬೆಂಗಳೂರು ಮತ್ತು ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಮತ್ತು ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು ಶ್ರೀ ಎನ್.ಚಂದ್ರಪ್ಪ, ಉಪಾಧ್ಯಕ್ಷರು ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಎನ್.ಗಂಗಣ್ಣ, ಅಧ್ಯಕ್ಷರು ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಕಾರ್ಯಾಗಾರದ ಉದ್ಘಾಟನೆ ಮಾಡಿ ನಂತರ ಅವರು ಮಾತನಾಡಿ ರಾಜ್ಯದಲ್ಲಿ ಅಂದಾಜು 4500ಕ್ಕೂ ಹೆಚ್ಚಿನ ಪತ್ತಿನ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಇಂದಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್‍ಗಳಿಗೆ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುವ ಮೂಲಕ ಸದಸ್ಯರಿಗೆ ಹೆಚ್ಚಿನ ಸಹಕಾರಿ ಸೌಲಭ್ಯವನ್ನು ನೀಡುವ ಮೂಲಕ ಸ್ಪರ್ಧಾತ್ಮಕವಾಗಿ ಸೇವೆ ಸಲ್ಲಿಸುತ್ತಿವೆ.

ಸಂಘಗಳ ಆಡಳಿತಮಂಡಳಿಯನ್ನು ಹೊರತುಪಡಿಸಿದಲ್ಲಿ ಸಹಕಾರ ಸಂಘಗಳ ಸಿಬ್ಬಂದಿಗಳ ಪಾತ್ರ ಹೆಚ್ಚಿನದು ಸಿಬ್ಬಂದಿಗಳ ಕಾರ್ಯನಿಷ್ಟೆ, ಪ್ರಾಮಾಣಿಕತೆ ಮತ್ತು ಶ್ರಮದ ಫಲವೆ ಸಹಕಾರ ಸಂಘಗಳು ಹೆಚ್ಚು ಸಹಕಾರಿ ಸೇವೆ ನೀಡುವ ಮೂಲಕ ಲಾಭಗಳಿಸುತ್ತಿವೆ ಎಂದು ತಿಳಿಸಿ ಶಿಕ್ಷಣ ತರಬೇತಿಯ ಮಹತ್ವವನ್ನು ಹಾಜರಿದ್ದ ಪದಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನದಟ್ಟು ಮಾಡಿಕೊಟ್ಟರು.

ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ಪಿ.ಕೆ.ಜಯಕೃಷ್ಣೇಗೌಡ, ಶ್ರೀ ಚಿತ್ತರಂಜನ್ ಬೋಳಾರ್, ಶ್ರೀ ಉಮೇಶ ಶಿ. ಬಾಳಿ, ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಸ್.ಎನ್.ಅರುಣ್‍ಕುಮಾರ್, ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶ್ರೀ ಹೆಚ್.ವಿ.ರಾಜೀವ್, ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಬಿ.ಆರ್.ಲಿಂಗರಾಜು, ಮೈಸೂರು ಜಿಲ್ಲಾ ಸಹಕಾರ ಸಂಘಗಳ ನಿಬಂಧಕರಾದ ಡಾ. ಜಿ.ಉಮೇಶ್ ರವರುಗಳು ಭಾಗವಹಿಸಿದ್ದರು.

ಈ ಶೈಕ್ಷಣಿಕ ತರಬೇತಿ ಕಾರ್ಯಾಗಾರದಲ್ಲಿ ಶ್ರೀ ಅನಿಲ್ ಭಾರದ್ವಾಜ್, ಚಾರ್ಟೆರ್ಡ್ ಅಕೌಂಟೆಂಟ್, ಬೆಂಗಳೂರು ಇವರು “ಸರಕು ಸೇವಾ ಕಾಯ್ದೆಯ ಮುಖ್ಯಾಂಶಗಳು” ಕುರಿತು ಉಪನ್ಯಾಸ ನೀಡಿದರು. ಶ್ರೀ ಹೆಚ್.ಎಸ್.ಸಂತೋಷ್‍ಕುಮಾರ್, ನಿವೃತ್ತ ಸಹಕಾರ ಸಂಘಗಳ ಜಂಟಿ ನಿಬಂಧಕರು ಇವರು “ಸಹಕಾರ ವಲಯದಲ್ಲಿ ಇತ್ತೀಚಿನ ಬೆಳವಣಿಗೆಗಳು, ಆಡಳಿತ ನಿರ್ವಹಣೆ ಮತ್ತು ಇತ್ತೀಚಿನ ಸಹಕಾರ ಕಾಯ್ದೆ ತಿದ್ದುಪಡಿ” ಕುರಿತು ಮತ್ತು ಶ್ರೀ ಪಿ.ರುದ್ರಪ್ಪ, ಸಲಹೆಗಾರರು, ರಾಜ್ಯ ಸಹಕಾರ ಮಹಾಮಂಡಳ ಇವರಿಂದ “ಕರ್ನಾಟಕದಲ್ಲಿ ಸಹಕಾರ ಚಳವಳಿಯ ಸಾಧನೆ ಸಹಕಾರ ಮಹಾಮಂಡಳ ಮತ್ತು ಸಹಕಾರ ಪತ್ತಿನ ಸಂಘಗಳ ಮಹಾಮಂಡಳಗಳ ಪಾತ್ರ” ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ಸಲಹೆಗಾರರಾದ ಶ್ರೀ ಕೆ.ಎಸ್.ಗುರುಪ್ರಸಾದ್, ರಾಜ್ಯ ಸಹಕಾರ ಮಹಾಮಂಡಳದ ಸಹಕಾರ ಶಿಕ್ಷಣಾಧಿಕಾರಿಯಾದ ಶ್ರೀ ಕೆ.ಮಲ್ಲಯ್ಯ ಮತ್ತು ರಾಜ್ಯ ಪತ್ತಿನ ಮಹಾಮಂಡಳದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪಿ.ಆಶಾಲತಾ ಮತ್ತು ಮೈಸೂರು ಜಿಲ್ಲಾ ಸಹಕಾರ ಯೂನಿಯನ್‍ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಜಿ.ಎಂ. ಚನ್ನಬಸಪ್ಪ ರವರುಗಳು ಉಪಸ್ಥಿತರಿದ್ದರು.

ರಾಜ್ಯ ಸಹಕಾರ ಮಹಾಮಂಡಳದ ಸಲಹೆಗಾರರಾದ ಶ್ರೀ ಪಿ.ರುದ್ರಪ್ಪ ರವರು ಕಾರ್ಯಕ್ರಮದ ನಿರೂಪಣೆ ಮಾಡಿದರು.
ಸದರಿ ಕಾರ್ಯಾಗಾರಕ್ಕೆ ರಾಜ್ಯ ಪತ್ತಿನ ಸಹಕಾರ ಮಹಾಮಂಡಳದಲ್ಲಿ ಸದಸ್ಯತ್ವ ಪಡೆದಿರುವ ಮೈಸೂರು ವಿಭಾಗದ 170ಕ್ಕೂ ಸಹಕಾರ ಸಂಘಗಳ ಪ್ರತಿನಿಧಿಗಳು ಹಾಜರಿದ್ದರು. ಕಾರ್ಯಾಗಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Back To Top