+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ದಿನಾಂಕ: 02-11-2019 ರಂದು ಉಡುಪಿಯಲ್ಲಿ ಮಹಾಮಂಡಳದ ವತಿಯಿಂದ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ಸಹಕಾರ ಸಂಘಗಳು ಸೇವೆಗಳನ್ನು ವಿಸ್ತರಿಸಿಕೊಳ್ಳಲು ಶಿಕ್ಷಣ ತರಬೇತಿ ಅವಶ್ಯಕ
– ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡ

ಉಡುಪಿ: ದಿನಾಂಕ 02-11-2019ರಂದು “ಜಗನ್ನಾಥ ಸಭಾ ಭವನ” ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಿ., ಎಲ್.ನಂ–2515, “ಚೇತನ ಕಟ್ಟಡ” ಎಲ್.ಎಂ.ಹೆಚ್ ರಸ್ತೆ, ಮಿಷನ್ ಕಾಂಪೌಂಡ್, ಉಡುಪಿ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಹಾಗೂ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಿ., ಉಡುಪಿ ಇವರ ಸಹಯೋಗದೊಡನೆ ಮೈಸೂರು ವಿಭಾಗದ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಪತ್ತಿನ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀಮತಿ ಕೆ.ಲಲತಿ ಜಿ.ಟಿ.ದೇವೇಗೌಡ ರವರು ಉಧ್ಘಾಟಿಸಿ ಕಾರ್ಯಗಾರದಲ್ಲಿ ನೆರೆದಿದ್ದ ಸಹಕಾರಿ ಪ್ರತಿನಿಧಿಗಳಿಗೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಮುಂದುವರೆದು ಮಾತನಾಡಿ ಪತ್ತಿನ ಸಹಕಾರ ಸಂಘಗಳು ಆಡಳಿತಮಂಡಳಿ ಮತ್ತು ಸಿಬ್ಬಂದಿಗಳಿಗೆ ಅಗತ್ಯ ಶಿಕ್ಷಣ ತರಬೇತಿ ಕಾರ್ಯಕ್ರಮಗಳನ್ನು ನೀಡುವುದರಿಂದ ಸಂಘಗಳು ಹೆಚ್ಚು ಪ್ರಗತಿ ಸಾಧಿಸಲು ಸಾಧ್ಯ ಎಂದರು.

ಮಹಾಮಂಡಳವು ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲಾ ಮಟ್ಟಗಳಲ್ಲಿ ಶಿಕ್ಷಣ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಆಡಳಿತಮಂಡಳಿಯಲ್ಲಿ ತೀರ್ಮಾಸಲಾಗುವುದು ಎಂದು ತಿಳಿಸಿದರು ಪತ್ತಿನ ಸಹಕಾರ ಮಹಾಮಂಡಳವು ತನ್ನದೇ ಆದ ಸುಸಜ್ಜಿತ ಕಟ್ಟಡವನ್ನು ಹೊಂದುವ ನಿಟ್ಟಿನಲ್ಲಿ ಪ್ರಯತ್ನ ಯೋಜನೆ ಹಮ್ಮಿಕೊಂಡಿದ್ದು ಎಲ್ಲಾ ಸಹಕಾರಿ ಸಂಸ್ಥೆಗಳು/ಸಹಕಾರಿಗಳು ಮಹಾಮಂಡಳದ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ಮನವಿ ಮಾಡಿದರು.

ಕಾರ್ಯಗಾರದಲ್ಲಿ ಮುಖ್ಯ ಅಥಿತಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರುಗಳಾದ ಶ್ರೀ ಡಾ|| ಸಂಜಯ ಪಂ. ಹೊಸಮಠ ಮತ್ತು ಶ್ರೀ ಚಿತ್ತರಂಜನ್ ಬೋಳಾರ್, ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ ಇದರ ಅಧ್ಯಕ್ಷರಾದ ಶ್ರೀ ಸಂಜೀವ ಕಾಂಚನ್, ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು ಜಿಲ್ಲಾ ಸಹಕಾರ ಯೂನಿಯನ್., ಉಡುಪಿ ಹಾಗೂ ಪ್ರಧಾನ ವ್ಯವಸ್ಥಾಪಕರು, ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ ಇವರುಗಳು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಅಥಿತಿಗಳಾದ ಶ್ರೀ ಪ್ರವೀಣ್ ಬಿ. ನಾಯಕ್, ಕೆ.ಸಿ.ಎಸ್ ಸಹಕಾರ ಸಂಘಗಳ ಉಪನಿಬಂಧರು, ಉಡುಪಿ ಜಿಲ್ಲೆ, ಶ್ರೀ ಯಶ್ ಪಾಲ್ ಎ. ಸುವರ್ಣ, ಅಧ್ಯಕ್ಷರು, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಇವರುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಅನಿಲ್ ಭಾರದ್ವಾಜ್, (ಸಿ.ಎ) ಇವರಿಂದ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ ಕುರಿತು ಹಾಗೂ ಶ್ರೀ ಶಶಿಧರ ಎಲೆ, ಸಹಕಾರ ಸಂಘಗಳ ಅಪರ ನಿಬಂಧಕರು (ನಿ.) ಇವರಿಂದ ಸಹಕಾರ ಸಂಘಗಳಲ್ಲಿ ಸಾಲ ವಸೂಲಾತಿ ಪ್ರಕ್ರಿಯೆ ಹಾಗೂ ಸಂಘಗಳಲ್ಲಿ ಚುನಾವಣಾ ನಿಯಮಾವಳಿಗಳ ಕುರಿತು, ಹಾಗೂ ಇ-ಸ್ಟಾಂಪಿಂಗ್ ತಜ್ಞರಿಂದ ಇ-ಸ್ಟಾಂಪಿಂಗ್ ಕುರಿತು ತರಬೇತಿ ನೀಡಿದರು. ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ ಇದರ ಉಪಾಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಹಾಮಂಡಳದ ಸಲಹೆಗಾರರಾದ ಶ್ರೀ ಕೆ.ಎಸ್. ಗುರುಪ್ರಸಾದ್ ರವರು ಗಣ್ಯರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಹಾಮಂಡಳದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಪಿ.ಆಶಾಲತಾ ರವರು ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ಸುಮಾರು 250ಕ್ಕು ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ಕಾರ್ಯಗಾರದ ಉಪನ್ಯಾಸವನ್ನು ಆಲಿಸಿದರು.

Back To Top