+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಬಾಗಲಕೋಟೆಯಲ್ಲಿ ಸಹಕಾರಿಗಳ ಪ್ರತಿಭಟನೆ – ಆದಾಯ ತೆರಿಗೆ ವಿನಾಯತಿಗೆ ಮನವಿ ಸಲ್ಲಿಕೆ

ಬಾಗಲಕೋಟೆ: ದಿನಾಂಕ: 27-12-2019ರಂದು ಬಾಗಲಕೋಟೆಯಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪತ್ರಿಭಟನೆಯನ್ನು ಶ್ರೀ ಅಜಯ್‍ಕುಮಾರ ಸರನಾಯಕ, ಮಾಜಿ ಸಚಿವರು ಹಾಗೂ ಅಧ್ಯಕ್ಷರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಬಾಗಲಕೋಟೆ ಇವರ ಹಾಗೂ ಮಹಾಮಂಡಳದ ನಿರ್ದೇಶಕರುಗಳ ನೇತೃತ್ವದಲ್ಲಿ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಸುಮಾರು 800ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಮೊದಲಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರಿಗೆ ಮಹಾಮಂಡಳದ ಪರವಾಗಿ ಮನವಿ ಪತ್ರವನ್ನು ಬಾಗಲಕೋಟೆ ಅಪರ ಜಿಲ್ಲಾಧಿಕಾರಿಗಳಿಗೆ ಮತ್ತು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮೆರವಣಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಅಜಯ್‍ಕುಮಾರ ಸರನಾಯಕ, ಮಾಜಿ ಸಚಿವರು ಹಾಗೂ ಹಾಲಿ ಅಧ್ಯಕ್ಷರು, ಬಿ.ಡಿ.ಸಿ.ಸಿ. ಬ್ಯಾಂಕ್ ಬಾಗಲಕೋಟೆ ಮತ್ತು ಪತ್ತಿನ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ರವೀಂದ್ರ ಪ್ರಲ್ಹಾದ ಕಲಬುರ್ಗಿ, ಡಾ|| ಸಂಜಯ ಪಂ. ಹೊಸಮಠ, ಶ್ರೀ ಶೇಖರಗೌಡ ಮಾಲಿ ಪಾಟೀಲ ರವರು ಮಾತನಾಡಿ ಸಹಕಾರ ಕ್ಷೇತ್ರಕ್ಕೆ ಮಾರಕವಾಗಿರುವ ಆದಾಯ ತೆರಿಗೆ ಕಾಯ್ದೆಯನ್ನು ಹಿಂಪಡೆಯುವಂತೆ ಕೇಂದ್ರ ಹಣಕಾಸು ಸಚಿವರಾದ ಶ್ರೀ ನಿರ್ಮಲ ಸೀತರಾಮನ್ ರವರಿಗೆ ಮತ್ತು ಆದಾಯ ತೆರಿಗೆ ಅಧಿಕಾರಿಗಳನ್ನು ಆಗ್ರಹಿಸಿದರು.

ಅನಂತರ, ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಸಭೆಯನ್ನು ನಡೆಸಲಾಯಿತು ಈ ಸಭೆಯಲ್ಲಿ ಪತ್ತಿನ ಸಹಕಾರ ಸಂಘಗಳು ಮುಂದಿನ ದಿನಗಳಲ್ಲಿ ಆದಾಯ ತೆರಿಗೆ ಸಮಸ್ಯೆಗಳ ಕುರಿತು ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಲಾಯಿತು.

ಈ ಪ್ರತಿಭಟನೆಯಲ್ಲಿ ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ರವೀಂದ್ರ ಪ್ರಲ್ಹಾದ ಕಲಬುರ್ಗಿ, ಶ್ರೀ ಧರೇಪ್ಪ ಎಂ. ಅಲಗೂರ, ಶ್ರೀ ಗುರುಪಾದಪ್ಪಗೌಡ ಬ. ಪಾಟೀಲ, ಶ್ರೀ ಹೊನ್ನಯ್ಯ ವಿ. ಹಿರೇಮಠ, ಶ್ರೀ ಶೇಖರಗೌಡ ಮಾಲಿ ಪಾಟೀಲ, ಡಾ|| ಸಂಜಯ ಪಂ. ಹೊಸಮಠ, ಶ್ರೀ ಉಮೇಶ ಶಿ. ಬಾಳಿ, ಮಾಜಿ ಶಾಸಕರಾದ ಶ್ರೀ ಎಸ್.ಎಸ್.ನಂಜಯ್ಯನ ಮಠ ಬಾಗಲಕೋಟೆ, ಶ್ರೀ ಶಿವಾನಂದ ಉದುಪುಡಿ, ಉಪಾಧ್ಯಕ್ಷರು, ಬಿ.ಡಿ.ಸಿ.ಸಿ ಬ್ಯಾಂಕ್ ಬಾಗಲಕೋಟೆ, ಶ್ರೀ ಕಾಶಿನಾಥ್ ಹುಡೇದ್, ಅಧ್ಯಕ್ಷರು, ಜಿ.ಸ.ಯೂ., ಬಾಗಲಕೋಟೆ, ಶ್ರೀ ಎನ್.ಎನ್.ಕಡಪಟ್ಟಿ, ಅಧ್ಯಕ್ಷರು, ಜಿಲ್ಲಾ ಕೃಷಿಯೇತರ ಪ.ಸ.ಸಂ.ಒ., ಬಾಗಲಕೋಟೆ, ಶ್ರೀ ಸೌಧಾಗಾರ್, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬಾಗಲಕೋಟೆ ಮತ್ತು ಮಹಾಮಂಡಳದ ಸಲಹೆಗಾರರಾದ ಶ್ರೀ ಕೆ.ಎಸ್.ಗುರುಪ್ರಸಾದ್ ಹಾಗೂ ಜಿಲ್ಲೆಯ ಹಿರಿಯ ಸಹಕಾರಿ ಮುಖಂಡರುಗಳು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು.

ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಶಿವಾನಂದ ಉದುಪುಡಿ ರವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ಸಹಕಾರಿ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ಊಟದ ವ್ಯವಸ್ಥೆಯನ್ನು ಏರ್ಪಡಿಸಿದ್ದರು.

Back To Top