+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಸಹಕಾರ ಸಂಘಗಳ ಉಳಿವಿಗಾಗಿ ಆದಾಯ ತೆರಿಗೆ ವಿನಾಯತಿ ನೀಡಲು ವಿಜಯಪುರದಲ್ಲಿ ಸಹಕಾರಿಗಳ ಪ್ರತಿಭಟನೆ

ವಿಜಯಪುರ: ದಿನಾಂಕ: 27-12-2019ರಂದು ವಿಜಯಪುರದಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಆದಾಯ ತೆರಿಗೆ ಇಲಾಖೆಯಿಂದ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ದಿನದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪತ್ರಿಭಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶ್ರೀ ಗುರುಪಾದಪ್ಪಗೌಡ ಬ. ಪಾಟೀಲ ರವರು ನೇತೃತ್ವದಲ್ಲಿ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಸುಮಾರು 500ಕ್ಕು ಹೆಚ್ಚು ಸಹಕಾರಿ ಮುಖಂಡರುಗಳು/ಪ್ರತಿನಿಧಿಗಳು ಭಾಗವಹಿಸಿದ್ದರು. ಮೊದಲಿಗೆ ಕೇಂದ್ರ ಹಣಕಾಸು ಸಚಿವರಿಗೆ ಮಹಾಮಂಡಳದ ಪರವಾಗಿ ಮನವಿ ಪತ್ರವನ್ನು ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮೆರವಣಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ಗುರುಪಾದಪ್ಪಗೌಡ ಬ. ಪಾಟೀಲ, ಶ್ರೀ ಧರೇಪ್ಪ ಎಂ. ಅಲಗೂರ, ಶ್ರೀ ಹೊನ್ನಯ್ಯ ವಿ. ಹಿರೇಮಠ, ಶ್ರೀ ಶೇಖರಗೌಡ ಮಾಲಿ ಪಾಟೀಲ, ಶ್ರೀ ರವೀಂದ್ರ ಪ್ರಲ್ಹಾದ ಕಲಬುರ್ಗಿ, ಡಾ|| ಸಂಜಯ ಪಂ. ಹೊಸಮಠ, ವಿಜಯಪುರ ಜಿಲ್ಲೆಯ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷರಾದ ಶ್ರೀ ಗುರುಶಾಂತ್ ನಿಡೋಣಿ ಮತ್ತು ಶ್ರೀಮಂತ ಇಂಡಿ ರವರು ಹಾಗೂ ಜಿಲ್ಲೆಯ ಹಿರಿಯ ಸಹಕಾರಿ ಪ್ರತಿನಿಧಿಗಳು ಭಾಗವಹಿಸಿದ್ದರು.

Back To Top