+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ದಿನಾಂಕ: 29-11-2019ರಂದು ಬಾಗಲಕೋಟೆಯಲ್ಲಿ ನಡೆದ ಶಿಕ್ಷಣ ತರಬೇತಿ ಕಾರ್ಯಕ್ರಮ

ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ – ಶ್ರೀ ಶೇಖರಗೌಡ ಮಾಲಿ ಪಾಟೀಲ

ಬಾಗಲಕೋಟೆ: ದಿನಾಂಕ 29-11-2019ರಂದು ಶ್ರೀ ಕಾಳಿದಾಸ ಕಲ್ಯಾಣ ಮಂಟಪ, ಬಾಗಲಕೋಟೆ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಕಲಬುರ್ಗಿ ವಿಭಾಗದ ವ್ಯಾಪ್ತಿಯ ಬಾಗಲಕೋಟೆ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಿತ್ತು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಶೇಖರಗೌಡ ಮಾಲಿ ಪಾಟೀಲ ರವರು ವಹಿಸಿದ್ದರು. ನಂತರ ಅವರು ಮಾತನಾಡಿ, ಪತ್ತಿನ ಸಹಕಾರ ಕ್ಷೇತ್ರದಿಂದ ದೇಶದ ಆರ್ಥಿಕ ಬೆಳವಣಿಗೆ ಸಾಧ್ಯ ಹಾಗೂ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಹೆಚ್ಚು ಕ್ರಿಯಾಶೀಲರಾಗಿ ಮುಂದುವರೆದರೆ ಮಾತ್ರ ಸಂಘಗಳು ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯ. ಇಲ್ಲವಾದಲ್ಲಿ ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಯಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದರು.

ಪತ್ತಿನ ಸಹಕಾರ ಮಹಾಮಂಡಳವು ತನ್ನದೇ ಕಟ್ಟಡವನ್ನು ಹೊಂದುವ ನಿಟ್ಟಿನಲ್ಲಿ ಪ್ರಯತ್ನ/ಯೋಜನೆಯನ್ನು ಹಮ್ಮಿಕೊಂಡಿದ್ದು ಎಲ್ಲಾ ಸಹಕಾರಿ ಸಂಸ್ಥೆಗಳು/ಸಹಕಾರಿಗಳು ಮಹಾಮಂಡಳದ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಶಿವಾನಂದ ಉದುಪುಡಿ ಇವರು ಕಾರ್ಯಗಾರವನ್ನು ಉಧ್ಘಾಟಿಸಿ ಮಾತನಾಡಿ ಮಹಾಮಂಡಳವು ಇತ್ತೀಚಿನ ಕಾರ್ಯವೈಖರಿಯ ಬಗ್ಗೆ ಶ್ಲಾಘಿಸಿದರು.
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಕೆ.ಕಾಳಪ್ಪ, ಇವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಪ್ರರಂಭಿಸಿದರು.

ಕಾರ್ಯಗಾರದಲ್ಲಿ ಮುಖ್ಯ ಅಥಿತಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ಧರೇಪ್ಪ ಎಂ. ಅಲಗೂರ, ಶ್ರೀ ಗುರುಪಾದಪ್ಪಗೌಡ ಬ. ಪಾಟೀಲ, ಶ್ರೀ ಹೊನ್ನಯ್ಯ ವಿ. ಹಿರೇಮಠ, ಶ್ರೀ ರವೀಂದ್ರ ಪ್ರಲ್ಹಾದ ಕಲಬುರ್ಗಿ, ಜಿಲ್ಲಾ ಸಹಕಾರ ಯೂನಿಯನ್., ಬಾಗಲಕೋಟೆ ಇದರ ಅಧ್ಯಕ್ಷರಾದ ಶ್ರೀ ಕಾಶಿನಾಥ್ ಹುಡೇದ್, ಶ್ರೀ ಎನ್.ಎನ್.ಕಡಪಟ್ಟಿ ಅಥಿತಿಗಳಾಗಿ ಶ್ರೀ ಕಲ್ಲಪ್ಪ ಒಬಣ್ಣಗೋಳ, ಸ.ಸಂ.ಉಪನಿಬಂಧಕರು, ಬಾಗಲಕೋಟೆ ಜಿಲ್ಲೆ, ಶ್ರೀ ಎಸ್.ಎಂ.ದೇವರಾಜು, ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಬಾಗಲಕೋಟೆ ಜಿಲ್ಲೆ, ಶ್ರೀ ಶಂಕರಪ್ಪ ಜನಿವಾರದ, ಉಪಾಧ್ಯಕ್ಷರು, ಜಿಲ್ಲಾ ಸಹಕಾರ ಯೂನಿಯನ್., ಬಾಗಲಕೋಟೆ ಮತ್ತು ಶ್ರೀ ಕೋಮಣ್ಣ ವೀ. ಧೂಪದ, ಉಪಾಧ್ಯಕ್ಷರು, ಶ್ರೀ ಗಾಯತ್ರಿ ಪ.ಸ.ಸಂ.ನಿ., ಸೂಳೇಭಾವಿ ಇವರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸನ್ನದು ಲೆಕ್ಕಪರಿಶೋಧಕರಾದ ಬಿ.ವಿ.ರವೀಂದ್ರನಾಥ್, (ಸಿ.ಎ) ಇವರಿಂದ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ ಕುರಿತು ಹಾಗೂ ಶ್ರೀ ಎಸ್.ಜೆ.ಜೋಷಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರು (ನಿ.,) ಇವರಿಂದ ಸಹಕಾರ ಸಂಘಗಳಲ್ಲಿ ಸಾಲ ವಸೂಲಾತಿ ಪ್ರಕ್ರಿಯೆ ಹಾಗೂ ಸಂಘಗಳಲ್ಲಿ ಚುನಾವಣಾ ನಿಯಮಾವಳಿಗಳ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್‍ನ ವ್ಯವಸ್ಥಾಪಕರಾದ ಶ್ರೀ ಮಹಾಂತೇಶ ನಾಗರಾಳ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ನಿರ್ದೇಶಕರಾದ ಶ್ರೀ ಧರೇಪ್ಪ ಎಂ. ಅಲಗೂರ ರವರು ಆರಂಭದಲ್ಲಿ ಸರ್ವರನ್ನು ಸ್ವಾಗತಿಸಿದರು. ಶ್ರೀ ಹೊನ್ನಯ್ಯ ವಿ. ಹಿರೇಮಠ ರವರು ಕೊನೆಯಲ್ಲಿ ವಂದನಾರ್ಪಣೆ ಮಾಡಿದರು. ಕಾರ್ಯಾಗಾರದಲ್ಲಿ ಸುಮಾರು 400ಕ್ಕು ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ಕಾರ್ಯಗಾರದ ಪ್ರಯೋಜನ ಪಡೆದರು.

Back To Top